ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ಕೆಜಿ ಅಕ್ಕಿಯ ಜೊತೆಗೆ ಇಂದಿರಾ ಕಿಟ್ ನಲ್ಲಿ ತೊಗರಿ ಬೇಳೆ, ಸಕ್ಕರೆ, ಉಪ್ಪು ವಿತರಿಸಲಾಗುವುದು. ಅಕ್ಕಿ ವಿತರಣೆ ಪ್ರಮಾಣ ಹೆಚ್ಚಾಗಿದ್ದು, ಅಷ್ಟು ಪ್ರಮಾಣದಲ್ಲಿ ಅಕ್ಕಿ ಬಳಕೆ ಮಾಡುವುದಿಲ್ಲ ಎನ್ನುವ ಕಾರಣಕ್ಕೆ ಇಂದಿರಾ ಕಿಟ್ ಯೋಜನೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಅನರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದಲ್ಲಿ ಕೂಡಲೇ ತಹಶೀಲ್ದಾರ್ ಭೇಟಿ ಮಾಡಿ ಅರ್ಜಿ ಸಲ್ಲಿಸಿದರೆ 15 ದಿನಗಳ ಒಳಗೆ ಪಡಿತರ ಚೀಟಿ ನೀಡಲಾಗುವುದು. ಅನರ್ಹರು ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಅವರು ಹೇಳಿದ್ದಾರೆ.
0 Comments